Sunday, November 21, 2021

ಕುಲ ಕುಲ ಕುಲವೆಂದು ಹೊಡದಾಡದಿರಿ ನಿಮ್ಮ ಕುಲದ ನೆಲಯನೇನಾದರೂ ಬಲ್ಲಿರ ಎಂದು ಜಾತಿ ಸಮಾನತೆ ಸಾರಿದ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿಯ ಶುಭಾಶಯಗಳು #Jigani_Ramakrishna #Hosabelaku_Trust #Donate_Organs_Gift_LIFE #9945028899

ಕುಲ ಕುಲ ಕುಲವೆಂದು ಹೊಡದಾಡದಿರಿ ನಿಮ್ಮ ಕುಲದ ನೆಲಯನೇನಾದರೂ ಬಲ್ಲಿರ ಎಂದು ಜಾತಿ ಸಮಾನತೆ ಸಾರಿದ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿಯ ಶುಭಾಶಯಗಳು ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ಧವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ. ಜೀವನ ಜನನ ಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ 1509ರಲ್ಲಿ ಕುರುಬ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. ಕನಕದಾಸರು ಬರಿ ಕುರುಬ ಜಾತಿಗೆ ಸೀಮಿತವಾದ ಭಕ್ತರಲ್ಲ ಎಲ್ಲಾ ಜಾತಿಗಳಿಗೆ ಬೇಕಾದವರು. 15 - 16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು. ಕನಕದಾಸರು ಅನೇಕ ಕೀರ್ತನೆಗಳನ್ನು ರಚಿಸಿದ್ದಾರೆ. ಐತಿಹ್ಯ ಸುಮಾರು ಐದು ನೂರು ವರ್ಷಗಳ ಹಿಂದಿನ ಮಾತು. ವಿಜಯನಗರ ಸಾಮ್ರಾಜ್ಯದಲ್ಲಿದ್ದ ಬಂಕಾಪುರ ಪ್ರಾಂತದ ಮುಖ್ಯಪಟ್ಟಣದ ಹೆಸರು ಬಾಡ ಎಂದು. ವಿಜಯನಗರದಿಂದ ಗೋವಾಕ್ಕೆ ಹೋಗುವ ಹೆದ್ದಾರಿ. ಈ ಬಾಡದಿಂದಲೇ ಹಾಯ್ದು ಹೋಗುತ್ತಿತ್ತು. ಬಾಡ ಒಳ್ಳೇ ಆಯಕಟ್ಟಿನ ಸ್ಥಳ. ಈ ಬಂಕಾಪುರ ಪ್ರಾಂತಕ್ಕೆ ಡಣ್ಣಾಯಕ, ಬೀರಪ್ಪನಾಯಕ. (ಡಣ್ಣಾಯಕ ಎಂದರೆ ಆಯಕಟ್ಟಿನ ಸ್ಥಳದಲ್ಲಿ ಕಾದಿಟ್ಟ ಸೈನ್ಯದ ದಳಕ್ಕೆ ಸೇನಾಪತಿ ಎಂದು ನೇಮಿಸಲ್ಪಟ್ಟವನು) ಬೀರಪ್ಪನ ಹೆಂಡತಿ ಬಚ್ಚಮ್ಮ. ಬೀರಪ್ಪನಾಯಕನಿಗೆ ತಿರುಪತಿ ತಿಮ್ಮಪ್ಪನಲ್ಲಿ ಬಹು ನಂಬಿಕೆ. ದಕ್ಷಿಣದಲ್ಲಿ ಸುಮಾರು ಒಂಬೈನೂರು ವರ್ಷಗಳ ಹಿಂದೆ ಶ್ರೀರಾಮಾನುಜಾಚಾರ್ಯರೆಂಬ ದೊಡ್ಡ ಗುರುಗಳು ಪ್ರಸಿದ್ಧರಾಗಿದ್ದರು. ಅವರು ಸ್ಥಾಪಿಸಿದ ಪಂಥಕ್ಕೆ ಶ್ರೀವೈಷ್ಣವ ಮತವೆಂದು ಹೆಸರು. ಡಣ್ಣಾಯಕ ಬೀರಪ್ಪನಾಯಕ ಮತ್ತು ಆತನ ಮಡದಿ ಬಚ್ಚಮ್ಮ ಇವರು ಶ್ರೀ ವೈಷ್ಣವ ಮತಕ್ಕೆ ಶರಣು ಹೋಗಿದ್ದರು. ಅಂದಿನಿಂದ ಇವರು ಸಹ ತಿರುಪತಿ ವಂಕಟೇಶ್ವರ ಸ್ವಾಮಿಯನ್ನೇ ತಮ್ಮ ಆರಾಧ್ಯ ದೈವವನ್ನಾಗಿ ಮಾಡಿಕೊಂಡರು. ಬೀರಪ್ಪ ನಾಯಕ ಮತ್ತು ಬಚ್ಚಮ್ಮರಿಗೆ ಅನೇಕ ದಿನಗಳಿಂದ ಒಂದು ಹಂಬಲವಿತ್ತು. ಅದೇನೆಂದರೆ, ತಮಗೆ ಒಬ್ಬ ಕುಲದೀಪಕನಾದ ಮಗ ಜನಿಸಬೇಕು ಎಂದು. “ವಂಶೋದ್ಧಾರಕನಾದ ಒಬ್ಬ ಮಗನನ್ನು ಕರುಣಿಸು” ಎಂದು ಈ ದಂಪತಿಗಳು ತಿರುಪತಿ ತಿಮ್ಮಪ್ಪನಿಗೆ ಹರಕೆ ಹೊತ್ತಿದ್ದರು. ಅವರ ಆಸೆ ಫಲಿಸಿತು. ಬೀರಪ್ಪ ನಾಯಕ ಮತ್ತು ಬಚ್ಚಮ್ಮರಿಗೆ ಒಬ್ಬ ಮಗ ಜನಿಸಿದ. ತಂದೆ ತಾಯಿಗಳಿಗೆ ಆನಂದವೋ ಆನಂದ. ತಿರುಪತಿ ತಿಮ್ಮಪ್ಪನ ಆಶೀರ್ವಾದ ಎಂದು ಅವರು ತಮ್ಮ ಮಗುವಿಗೆ “ತಿಮ್ಮಪ್ಪ” ಎಂದೇ ನಾಮಕರಣ ಮಾಡಿದರು. ತಿಮ್ಮಪ್ಪ ಜನಿಸಿದ ಕಾಲ ಇಂತದ್ದೇ ಎಂದು ತಿಳಿಯದು; ಹದಿನೈದನೇಯ ಶತಮಾನದ ಕೊನೆಯ ವರ್ಷಗಳಲ್ಲಿ ಹುಟ್ಟಿದರು ಎಂದು ಹೇಳಬಹುದು. ತಿಮ್ಮಪ್ಪನಾಯಕ ಒಬ್ಬ ಸೇನಾಧಿಪತಿಯ ಮಗನಾಗಿ ಜನಿಸಿದನಷ್ಟೆ. ಬಾಲ್ಯದಲ್ಲಿಯೇ ಅಕ್ಷರಾಭ್ಯಾಸ, ಬಂಕಾಪುರದ ಶ್ರೀನಿವಾಸಾಚಾರ್ಯರ ಬಳಿ ವಿದ್ಯಾಭ್ಯಾಸವಾಗಿ, ವ್ಯಾಕರಣ, ತರ್ಕ, ಮೀಮಾಂಸೆ, ಸಾಹಿತ್ಯಗಳಲ್ಲಿ ಪಾರಂಗತನಾದನು. ಜೊತೆಗೆ ಕತ್ತಿವರಸೆ, ಕುದುರೆ ಸವಾರಿಯನ್ನೂ ಕಲಿತ. ಕೆಲವು ವರ್ಷಗಳಲ್ಲಿ ಬೀರಪ್ಪನಾಯಕ ಮತ್ತು ಬಚ್ಚಮ್ಮ ತೀರಿಕೊಂಡರು. ತಂದೆಯ ಬಳಿಕ ತಿಮ್ಮಪ್ಪ ನಾಯಕ ತನ್ನ ಕಿರಿವಯಸ್ಸಿನಲ್ಲಿಯೇ ಬಂಕಾಪುರ ಪ್ರಾಂತಕ್ಕೆ ಡಣ್ಣಾಯಕನಾದ. ಕನಕ ದಾಸರು ತಮ್ಮನ್ನು ತಾವೇ ಸಾವಿನ ದೇವತೆಯಾದ ಯಮನೆಂದು ತಮ್ಮ ಕೃತಿಗಳಲ್ಲಿ ಉಲ್ಲೇಖಿಸಿದ್ದಾರೆ. ಸಾಧನೆ ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ ಎಂಬುದು ಕನಕ ದಾಸರ ಸಾಹಿತ್ಯ ರಚನೆ ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ ಕಾವ್ಯಕೃತಿಗಳು ಇಂತಿವೆ: 1. ಮೋಹನತರಂಗಿಣಿ 2. ನಳಚರಿತ್ರೆ 3. ರಾಮಧಾನ್ಯ ಚರಿತೆ 4. ಹರಿಭಕ್ತಿಸಾರ 5. ನೃಸಿಂಹಸ್ತವ (ಉಪಲಬ್ದವಿಲ್ಲ) ಮೋಹನತರಂಗಿಣಿ ಮೋಹನತರಂಗಿಣಿಯು 42 ಸಂಧಿಗಳಿಂದ ಕೂಡಿದ್ದು ಸಾಂಗತ್ಯದಲ್ಲಿ ರಚಿತವಾಗಿರುವ 2798 ಪದ್ಯಗಳಿವೆ. ಮೋಹನತರಂಗಿಣಿಯಲ್ಲಿ ಕನಕದಾಸರು ಕೃಷ್ಣಚರಿತ್ರೆಯನ್ನು ಹೇಳುತ್ತಾ ತಮ್ಮ ಅಧಿರಾಜ ಕೃಷ್ಣದೇವರಾಯನನ್ನೇ ಕೃಷ್ಣನಿಗೆ ಹೋಲಿಸುತ್ತಾರೆ. ಅವರ ದ್ವಾರಕಾಪುರಿ ಸ್ವಯಂ ವಿಜಯನಗರವೇ ಆಗಿರುವುದು ಇತಿಹಾಸದಿಂದ ತಿಳಿದು ಬರುತ್ತದೆ. ಮೋಹನತರಂಗಿಣಿ ಅಥವಾ ಕೃಷ್ಣಚರಿತೆ ಎಂಬ ಈ ಕಾವ್ಯದಲ್ಲಿ ಕನಕದಾಸರ ಸಮಕಾಲೀನ ಜೀವನ ಚಿತ್ರಗಳು ಹಾಗೂ ಪೌರಾಣಿಕ ಕಥೆಗಳು ಅಚ್ಚಗನ್ನಡದಲ್ಲಿ ನಿರೂಪಿತವಾಗಿವೆ. ದಣ್ಣಾಯಕನಾಗಿ ಕನಕ ಆಗಾಗ್ಗೆ ರಾಜಧಾನಿ ವಿಜಯನಗರಕ್ಕೆ ಹೋಗಬೇಕಾಗಿತ್ತು. ವಿಜಯನಗರ ಸಾಮ್ರಾಜ್ಯದ ರಾಜವೈಭವ, ರಾಜಸಭೆ, ರಾಜಪರಿವಾರದ ಸರಸ ಸುಮ್ಮಾನ, ಶೃಂಗಾರ ಜೀವನ, ಜಲಕ್ರೀಡೆ, ಓಕುಳಿಯಾಟ, ನವರಾತ್ರಿ, ವಿಜಯನಗರದ ಪುರರಚನೆ, ಉದ್ಯಾನವನ, ಪ್ರಜೆಗಳ ವೇಷಭೂಷಣ, ರಾಜ್ಯದ ಯುದ್ಧ ವಿಧಾನ ಇತ್ಯಾದಿಗಳು ಅವನ ಮನಸೂರೆಗೊಂಡಿದ್ದವು. ಕವಿ ಮನಸಿನ ಕನಕ ತನ್ನ ಅನುಭವವನ್ನೆಲ್ಲ ಬರಹ ರೂಪಕ್ಕೆ ತಂದ. ಆ ಬರಹವೇ ಇಂದು ನಮಗೆ ಲಭ್ಯವಿರುವ ಮೋಹನತರಂಗಿಣಿ. ಕನಕನ ಯೌವನ ಕಾಲದಲ್ಲಿ ರಚಿತವಾದ ತರಂಗಿಣಿಯ ಒಡಲಲ್ಲಿ ಯುದ್ಧದ ವರ್ಣನೆಗಳು ಹೆಚ್ಚೆನ್ನಬಹುದು. ಏಕೆಂದರೆ ಕನಕ ಸ್ವತಃ ಕಲಿಯಾಗಿದ್ದವನೇ ತಾನೇ? ಹಂಪಿಯ ಪತನವನ್ನು (೧೫೬೫) ಸಹ ಕನಕ ನೋಡಿದ್ದರು. ಶಂಬರಾಸುರ ವಧೆ, ಬಾಣಾಸುರ ವಧೆ, ಹರಿಹರ ಯುದ್ಧ ಹೀಗೆ ವೀರರಸ, ರೌದ್ರರಸ ಕಾವ್ಯದಲ್ಲಿ ಮೇಳೈಸಿವೆ. ಸೋಮಸೂರಿಯ ವೀಥಿಯ ಇಕ್ಕೆಗಳಲಿ ಹೇಮ ನಿರ್ಮಿತ ಸೌಧದೋಳಿ ರಮಣೀಯತೆವೆತ್ತ ಕಳಸದಂಗಡಿಯಿರ್ದುಂ ವಾ ಮಹಾ ದ್ವಾರಕಾಪುರದೇ ಓರಂತೆ ಮರಕಾಲರು ಹಡಗಿನ ವ್ಯವ ಹಾರದಿ ಗಳಿಸಿದ ಹಣವ ಭಾರ ಸಂಖ್ಯೆಯಲಿ ತೂಗುವರು ಬೇಡಿದರೆ ಕು ಬೇರಂಗೆ ಕಡವ ಕೊಡುವರು ನಳಚರಿತ್ರೆ ನಳಚರಿತ್ರೆಯು 9 ಸಂಧಿಗಳಿಂದ ಕೂಡಿದ್ದು ಭಾಮಿನೀ ಷಟ್ಪದಿಯಲ್ಲಿ ರಚನೆಯಾಗಿರುವ 481 ಪದ್ಯಗಳಿವೆ. ಮಹಾಭಾರತದಂತಹ ರಾಷ್ಟ್ರ ಮಹಾಕಾವ್ಯಕ್ಕೆ ಪ್ರೇರಣೆಯಾದ ಉಜ್ವಲ ಆರ್ಯೇತರ ಪ್ರೇಮಕಥೆ ನಳ ದಮಯಂತಿಯರ ಕಥೆ. ೧೩ನೇ ಶತಮಾನದ ನಳ ಚಂಪೂವಿಗಿಂತ ಈ ನಳಚರಿತ್ರೆ ಹೃದಯಸ್ಪರ್ಶಿಯಾದ ಚಿತ್ರಣಗಳಿಂದ ಚಿರಂತನ ಪ್ರೇಮದ ಕಥನದಿಂದ ಅಶ್ಲೀಲತೆಯ ಸೋಂಕಿಲ್ಲದ ಶೃಂಗಾರ ವರ್ಣನೆಯಿಂದ ಶೋಭಿಸುತ್ತಾ ಇಂದಿಗೂ ಅತ್ಯಂತ ಜನಪ್ರಿಯವಾಗಿದೆ. ನಳ ಮತ್ತು ದಮಯಂತಿಯರು ಹಂಸದ ಮೂಲಕ ಪ್ರೇಮ ಸಂದೇಶಗಳನ್ನು ಕಳಿಸುವುದು, ಅವರ ಸಂತೋಷ-ಆಮೋದ-ಪ್ರವೋದ ನಂತರದ ಕಷ್ಟಕಾಲ ಹಾಗೂ ಅದರ ನಂತರದ ಪುನರ್ಮಿಲನ ಹೀಗೆ ಎಲ್ಲರಿಗೂ ಈ ಕಥೆ ಚಿರಪರಿಚಿತ. ಕಷ್ಟ ಕಾಲದಲ್ಲಿ ಕಾಡಿನಲ್ಲಿ ಮಲಗಿರುವಾಗ ದಮಯಂತಿಯನ್ನು ಕುರಿತು ನಳ: ಲಲಿತ ಹೇಮದ ತೂಗಮಂಚದ ಹೊಳೆವ ಮೇಲ್ವಾಸಿನಲಿ ಮಲಗು ಲಲನೆಗೀ ವಿಧಿ ಬಂದುದೇ ಹಾ! ಎನುತ ಬಿಸುಸುಯ್ದ (೫-೨) ಹೀಗೆ ನಳಚರಿತ್ರೆಯಲ್ಲಿ ಕರುಣರಸಕ್ಕೇ ಪ್ರಾಧಾನ್ಯತೆ ಇದೆ. ಇನ್ನು ನಳಚರಿತ್ರೆಯಲ್ಲಿನ ಶೃಂಗಾರರಸದ ಬಗ್ಗೆ ಹೇಳುವುದಾದರೆ ಅದು ಪ್ರೌಢಶೃಂಗಾರ ಎನ್ನಬಹುದೇನೋ? ಅಲ್ಲಿ ಮೋಹನ ತರಂಗಿಣಿಯಲ್ಲಿ ಅದು ಕಣ್ಣು ಕುಕ್ಕುವ ಶೃಂಗಾರ, ಆದರೂ ಅದು ಹುಳಿಮಾವಿನಂತೆ ಹಂಚಿ ತಿನ್ನಲಾಗದು. ಮುಕ್ತವಾಗಿ ಚರ್ಚಿಸಲಾಗದು. ನಳಚರಿತ್ರೆಯ ಶೃಂಗಾರವಾದರೆ ಮಲ್ಲಿಗೆ ಮಾವಿನ ಹಾಗೆ, ಮಧುರ ರುಚಿ, ಮಧುರ ಸುವಾಸನೆ. ರಾಮಧಾನ್ಯಚರಿತೆ ರಾಮಧಾನ್ಯಚರಿತ್ರೆ ಭಾಮಿನೀ ಷಟ್ಪದಿಯಲ್ಲಿ ರಚಿತವಾಗಿರುವ 156 ಪದ್ಯಗಳನ್ನು ಒಳಗೊಂಡಿದೆ. ಈ ಕೃತಿಯಲ್ಲಿ ಧನಿಕರ ಆಹಾರಧಾನ್ಯ ಅಕ್ಕಿ ಹಾಗೂ ಕೆಳವರ್ಗದವರ ಆಹಾರಧಾನ್ಯವೆಂದು ಪರಿಭಾವಿಸಲಾಗಿರುವ ರಾಗಿಯ ನಡುವಿನ ಸಂಭಾಷಣೆಯ ಮೂಲಕ ರಾಗಿ ಹೇಗೆ ತನ್ನ ಔನ್ನತ್ಯವನ್ನು ಸಾಬೀತು ಪಡಿಸುತ್ತದೆ ಹಾಗೂ ರಾಮಧಾನ್ಯವೆಂಬ ಹೆಸರು ಪಡೆಯುತ್ತದೆ ಎಂಬುದನ್ನು ನಿರೂಪಿಸಲಾಗಿದೆ. ಇದರಲ್ಲಿ ಯುದ್ಧದ ಸನ್ನಿವೇಶ ಇಲ್ಲವಾದರೂ ವೀರರಸದ ಮಾತುಗಳಿಗೇನೂ ಕೊರತೆಯಿಲ್ಲ. ನುಡಿಗೆ ಹೇಸದ ಭಂಡ ನಿನ್ನೊಳು ಕೊಡುವರೇ ಮಾರುತ್ತರವ ಕಡುಜಡವಲಾ, ನಿನ್ನೊಡನೆ ಮಾತೇಕೆ? ಹೆಣದ ಬಾಯಿಗೆ ತುತ್ತು ನೀನಹೆ ನಿನ್ನ ಜನ್ಮ ನಿರರ್ಥಕವಲಾ ಎಲವೂ ನೀನೆಲ್ಲಿಹೆಯೋ ನಿನ್ನಯ ಬಳಗವದು.. ಮುಂತಾದ ಮಾತುಗಳಲ್ಲಿ ಕನಕದಾಸರು ರಾಗಿಯ ನೆಪ ಹಿಡಿದು ತಮ್ಮದೇ ಆತ್ಮಕಥೆಯನ್ನು ಹೇಳುತ್ತಿರುವಂತೆ ತೋರುತ್ತದೆ. ಸಮಾಜದ ಮೇಲ್ವರ್ಗದವರ ಆಹಾರ ಧಾನ್ಯ ಭತ್ತ ಹಾಗೂ ಕೆಳವರ್ಗದವರ ಆಹಾರ ಧಾನ್ಯ ರಾಗಿಯ ನಡುವಿನ ಸಂಭಾಷಣೆಯನ್ನು ನಿರೂಪಿಸುವ ಕನಕದಾಸರ ಸೃಜನಶೀಲತೆ ಅತಿಶಯ. ಒಂದು ರೀತಿಯಲ್ಲಿ ರಾಮಧಾನ್ಯಚರಿತ್ರೆ ಇಂದಿನ ಬಂಡಾಯ ಸಾಹಿತ್ಯದ ಬೇರು, ನವ್ಯೋತ್ತರದ ಸೂರು ಎಂದರೆ ಬಹುಶ: ತಪ್ಪಾಗಲಾರದು. ಹರಿಭಕ್ತಿಸಾರ ಹರಿಭಕ್ತಿಸಾರ ೧೧೦ ಭಕ್ತಿಪದ್ಯಗಳಿರುವ ಗ್ರಂಥ. ಭಾಮಿನೀ ಷಟ್ಪದಿಯಲ್ಲಿ ಸರಳಗನ್ನಡದಲ್ಲಿ ರಚಿತವಾಗಿರುವ ಈ ಗ್ರಂಥ ಕನ್ನಡದ ಭಗವದ್ಗೀತೆಯಂತಿದೆ. ಒಟ್ಟಿನಲ್ಲಿ ಕನಕದಾಸರ ಎಲ್ಲ ಕಾವ್ಯಗಳೂ ಕವಿ ಸಹಜವಾದ ವರ್ಣನೆಗಳಿಂದಲೂ ಉಪಮೆಗಳಿಂದಲೂ ಶ್ರೀಮಂತವಾಗಿದ್ದು ಅವರ ಕಾವ್ಯ ಕೌಶಲಕ್ಕೆ ಎಲ್ಲರೂ ಬೆರಗಾಗುವಂತೆ ಮಾಡಿದೆಯೆಂದರೆ ಉತ್ಪ್ರೇಕ್ಷೆಯಲ್ಲ. ಕೀರ್ತನೆಗಳು ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಕನಕದಾಸರ ಭಕ್ತಿ ಪಾರಮ್ಯವನ್ನು ಅವರ ಕೀರ್ತನೆಗಳಲ್ಲಿ ಕಾಣಬಹುದು. ಶ್ರೀಹರಿಯನ್ನು ತಮ್ಮ ಧಣಿಯಾಗಿ, ಇನಿಯನಾಗಿ, ಅಣೋರಣೀಯನಾಗಿ, ಮಹತೋಮಹೀಮನಾಗಿ ಅವರು ಕಂಡಿದ್ದಾರೆ. 'ಬಾ ರಂಗ ಎನ್ನ ಮನಕೆ ಎಂದು ಹೃದಯ ಸದನಕ್ಕೆ 'ಎಂದು ಕರೆದು ನೆಲೆ ನಿಲ್ಲಿಸಿಕೊಂಡ ಅನುಭಾವ ಅವರದು. ಒಳಗಣ್ಣಿನಿಂದ ಅವನ ಕಂಡು- 'ಕಂಡೆ ನಾ ತಂಡ ತಂಡ ಹಿಂಡು ದೈವ ಪ್ರಚಂಡ ರಿಪು ಗಂಡ ಉದ್ಧಂಡ ನರಸಿಂಹನ' ಎಂದು ಸಂತೋಷಪಟ್ಟಿದ್ದಾರೆ. 'ಎಲ್ಲಿ ನೋಡಿದರಲ್ಲಿ ರಾಮ' ಎಂಬ ಅನುಭೂತಿಯಲ್ಲಿ ಹರಿಯನ್ನು ಕಂಡ ಬಳಿಕ 'ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು' ಎಂಬ ಧನ್ಯತಾಭಾವ. 'ದಾಸದಾಸರ ಮನೆಯ ದಾಸಿಯರ ಮಗ ಮಂಕುದಾಸ ಮರುಳುದಾಸ ನರಜನ್ಮಹುಳು ಪರಮಪಾಪಿ' ಎಂದು ಕರೆದುಕೊಂಡಿದ್ದ ಅವರು ಜೀವ ಮಾಗಿ ಹಣ್ಣಾದಂತೆ ಪರಮಾತ್ಮನ ಸಾಕ್ಷಾತ್ಕಾರವಾದಂತೆ 'ಆತನೊಲಿದ ಮೇಲೆ ಇನ್ಯಾತರ ಕುಲವಯ್ಯಾ' ಎಂದುಕೊಳ್ಳುತ್ತಾರೆ. ಜೈನ, ವೀರಶೈವರ ಕಿತ್ತಾಟ, ಮುಸಲ್ಮಾನ ಪ್ರಾಬಲ್ಯ ಇವುಗಳಿಂದ ಸೊರಗಿ ಹೋಗಿದ್ದ ವೈದಿಕ ಧರ್ಮಕ್ಕೆ ಪುನಶ್ಚೇತನ ನೀಡಲು ವ್ಯಾಸರಾಯರಂಥವರು ಶ್ರಮಿಸುತ್ತಿದ್ದ ಕಾಲವದು. ವೈದಿಕ ಸಂಸ್ಕೃತಿಯ ಉತ್ಥಾನಕ್ಕೆಂದು ಹುಟ್ಟು ಹಾಕಲಾದ ವಿಜಯನಗರ ಸಾಮ್ರಾಜ್ಯ ಕೃಷ್ಣದೇವರಾಯನ ಅಳಿವಿನ ನಂತರ ಪತನದ ಹಾದಿ ಹಿಡಿದಿತ್ತು. ಇಂಥಲ್ಲಿ ಕನಕದಾಸರಂಥವರ ಕಾವ್ಯಕೃಷಿ ಹಾಗೂ ಸಾರ್ವಜನಿಕ ಜೀವನ ವ್ಯಾಸರಾಯರಿಗೆ ಬೆಂಬಲದ ಶ್ರೀರಕ್ಷೆಯಾಗಿದ್ದವು. 'ನಾವು ಕುರುಬರು ನಮ್ಮ ದೇವರು ಬೀರಯ್ಯ ಕಾವ ನಮ್ಮಜ್ಜ ನರಕುರಿ ಹಿಂಡುಗಳ' ಎಂದು ವಿನೀತ ಜಾತಿ ಭಾವನೆ ತೋರಿದ್ದ ಕನಕದಾಸರು ವ್ಯಾಸರಾಯರ ಸಂಪರ್ಕದ ನಂತರ 'ಕುಲಕುಲಕುಲವೆಂದು ಹೊಡೆದಾಡದಿರಿ' ಎಂದು ಜಂಕಿಸಿ ಕೇಳುವ ಹಾಗಾದರು. ಇಂಥ ನಡವಳಿಕೆಗಳಿಂದ ವೈದಿಕ ಧರ್ಮದ ಗುತ್ತಿಗೆ ತಮ್ಮದು ಎಂದು ಭಾವಿಸಿದ್ದ ಬ್ರಾಹ್ಮಣರಿಗೆ ಕನಕದಾಸರು ಬಿಸಿ ತುಪ್ಪವಾದರು. ಹಿಂದೂ ಸಮಾಜದಲ್ಲಿ ಈ ಬ್ರಾಹ್ಮಣ ಬ್ರಾಹ್ಮಣೇತರ ಕಂದರ/ಕ ದೊಡ್ಡದಾಗುತ್ತಾ ಹೋದಂತೆ ವ್ಯಾಸಪೀಠದ ಜೊತೆಗೆ ದಾಸಕೂಟದ ರಚನೆಯೂ ಆಗಬೇಕಾದಂತಹ ಅನಿವಾರ್ಯತೆ ಮೂಡಿತು. ಉಚ್ಚಕುಲದ ಮಾಧ್ವ ಬ್ರಾಹ್ಮಣರು ಶಾಸ್ತ್ರಾಧ್ಯಯನ-ತರ್ಕ-ವ್ಯಾಕರಣಾದಿ ವಿಶಿಷ್ಟ ಜ್ಞಾನಸಂಪನ್ನರಾಗಿ ಶಬ್ದ ಶಬ್ದಗಳನ್ನು ತಿಕ್ಕಿ ತೀಡಿ ನಿಷ್ಪತ್ತಿ ಹಿಡಿದು ಸಿದ್ಧಾಂತ ಪ್ರಮೇಯಗಳನ್ನು ಮಂಡಿಸುವುದೇ ಮುಂತಾದ ಪ್ರಕ್ರಿಯೆಗಳನ್ನು ವ್ಯಾಸಪೀಠದಲ್ಲಿ ನಡೆಯಿಸುತ್ತಿದ್ದರು. ಪುರಂದರದಾಸ, ಕನಕದಾಸ, ಜಗನ್ನಾಥದಾಸ ಮೊದಲಾದವರ ಪ್ರಾತಿನಿಧಿಕ ಸಂಘಟನೆಯೇ ದಾಸಕೂಟ. ಇವರೂ ಮಾಧ್ವ ಮತ ಪ್ರಮೇಯಗಳನ್ನೇ ಪಸರಿಸುತ್ತಾ ಆಚರಿಸುತ್ತಿದ್ದರಾದರೂ ಅವುಗಳನ್ನು ಅರಿಯಲು ಸಂಸ್ಕೃತ ಜ್ಞಾನದ ಅನಿವಾರ್ಯತೆಯನ್ನು ನಿರಾಕರಿಸಿ, ಜಾತಿ ಮತಗಳ ಕಟ್ಟು ಪಾಡಿಲ್ಲದ ಇವರು ಶಾಸ್ತ್ರಾಧ್ಯಯನದ ಅನಿವಾರ್ಯತೆ ಇಲ್ಲದೆ ತಮ್ಮ ಅನುಭಾವದಿಂದ ಹೊರಹೊಮ್ಮುವ ಭಕ್ತಿಭಾವನೆಗಳನ್ನು ತಮ್ಮ ತಾಯ್ನುಡಿಯಲ್ಲಿ ಹಾಡಿ ಲೋಕಪಾವನವನ್ನೂ ಆತ್ಮೋದ್ಧಾರವನ್ನೂ ಮಾಡ ಬೇಕೆನ್ನುವವರು. ಇಂಥಾ ದಾಸಕೂಟವನ್ನು ಹುಟ್ಟುಹಾಕಿ ಪೋಷಿಸಿ ಬೆಳೆಸಿದವರು ವ್ಯಾಸರಾಯರು ಹಾಗೂ ವಾದಿರಾಜರು. ಇಷ್ಟಿದ್ದರೂ ದಾಸಕೂಟ ವ್ಯಾಸಪೀಠಗಳ ನಡುವೆ ಆಗಿಂದಾಗ್ಗೆ ಘರ್ಷಣೆಗಳು ನಡೆದೇ ಇದ್ದವು. ಈ ಕುರಿತು ಕನಕ ಪುರಂದರರ ಕೀರ್ತನೆಗಳೇ ನಮಗೆ ಸೂಚ್ಯವಾಗಿ ಹೇಳುತ್ತವೆ. ಕುಲಕುಲವೆನ್ನುತಿಹರು ಕುಲವಾವುದು ಸತ್ಯ ಸುಖವುಳ್ಳ ಜನರಿಗೆ . ತೀರ್ಥವನು ಪಿಡಿದವರು ತಿರುನಾಮಧಾರಿಗಳೇ ಜನ್ಮ ಸಾರ್ಥಕವಿರದವರು ಭಾಗವತರಹುದೇ ಆವ ಕುಲವಾದರೇನು ಆವನಾದರೇನು ಆತ್ಮಭಾವವರಿತ ಮೇಲೆ . ಅವರ ಕೀರ್ತನೆಗಳಲ್ಲಿ ಅವರ ಸಂದೇಶ ನೇರ ಮತ್ತು ಖಚಿತ. ಹಾಗೆಯೇ ಅಮೂರ್ತವಾದ ಪ್ರತಿಮಾ ನಿರೂಪಣೆಯಲ್ಲಿ ಪರಿಣತಿ, ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತ ಸಾಹಿತ್ಯಗಳ ಪರಿಚಯವನ್ನು ಅವರ ಸಾಹಿತ್ಯದಲ್ಲಿ ಕಾಣಬಹುದು. ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊ ನೀ ದೇಹದೊಳಗೊ, ನಿನ್ನೊಳು ದೇಹವೂ ಬಯಲು ಆಲಯದೊಳಗೊ, ಆಲಯವು ಬಯಲೊಳಗೊ ಬಯಲು ಆಲಯವೆರಡು ನಯನದೊಳಗೊ ನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊ ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ ಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊ ಸವಿಯು ಸಕ್ಕರೆಯೆರಡು ಜಿಹ್ವೆಯೊಳಗೊ ಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊ ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ ಕುಸುಮದೊಳು ಗಂಧವೊ, ಗಂಧದೊಳು ಕುಸುಮವೊ ಕುಸುಮ ಗಂಧಗಳೆರಡು ಘ್ರಾಣದೊಳಗೊ ಅಸಮಭವ ಕಾಗಿನೆಲೆಯಾದಿಕೇಶವರಾಯ ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೆ ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ ಬರಿದೇ ಮಾತೇಕಿನ್ನೂ ಅರಿತು ಪೇಳುವೆನಯ್ಯ... ||ಪ|| ತಾಯಿ ತಂದೆಯ ಬಿಟ್ಟು ತಪವ ಮಾಡಲುಬಹುದು ದಾಯಾದಿ ಬಂಧುಗಳ ಬಿಡಲುಬಹುದು ರಾಯ ತಾ ಮುನಿದರೆ ರಾಜ್ಯವನೆ ಬಿಡಬಹುದು ಕಾಯಜಾ ಪಿತನಿನ್ನ ಅಡಿಯ ಬಿಡಲಾಗದು... ||೧|| ಒಡಲು ಹಸಿದರೆ ಮತ್ತೆ ಅನ್ನವನೆ ಬಿಡಬಹುದು ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು ಮಡದಿ ಮಕ್ಕಳ ಕಡೆಗೆ ತೊಲಗಿಸಿಯೆ ಬಿಡಬಹುದು ಕಡಲೊಡೆಯ ನಿನ್ನಡಿಯ ಘಳಿಗೆ ಬಿಡಲಾಗದು...||೨|| ಪ್ರಾಣವನು ಪರರು ಬೇಡಿದರೆತ್ತಿ ಕೊಡಬಹುದು ಮಾನಾಭಿಮಾನವ ತಗ್ಗಿಸಲುಬಹುದು ಪ್ರಾಣದಾಯಕಾನಾದ ಆದಿಕೇಶವರಾಯ ಜಾಣ ಶ್ರೀ ಕೃಷ್ಣ ನಿನ್ನಡಿಯ ಬಿಡಲಾಗದು....||೩|| ಕನಕದಾಸರನ್ನು ಕುರಿತ ಕೃತಿಗಳು ಇಂಗ್ಲಿಷಿಗೆ ಅನುವಾದ ವಾಗಿದೆ. 1. J.Aravinda Raman - ಕುಲ ಕುಲ ಸಂಸ್ಕೃತಕ್ಕೆ 1. ಹರಿಭಕ್ತಿಸಾರ, ಆರ್. ಗಣೇಶ್, ಪ್ರ: ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಉಡುಪಿ ಕನ್ನಡದಲ್ಲಿ 1. ಕನಕವಾಣಿ, ಸಂ: ಜಗನ್ನಾಥ ಆರ್. ಗೇನಣ್ಣವರ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 2. ಸಂತ ಶ್ರೀ ಕನಕದಾಸರ ಜೀವನ ಸಂದೇಶ, ಸಂ: ಜಗನ್ನಾಥ ಆರ್. ಗೇನಣ್ಣವರ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 3. ಸಂತ ಶ್ರೀ ಕನಕದಾಸರ ಸಾಹಿತ್ಯ ದರ್ಶನ, ಸಂ: ಜಗನ್ನಾಥ ಆರ್. ಗೇನಣ್ಣವರ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 4. ಸಂತ ಶ್ರೀ ಕನಕದಾಸರ ಪಾರಂಪರಿಕ ಸ್ಥಳಗಳು, ಜಗನ್ನಾಥ ಆರ್. ಗೇನಣ್ಣವರ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 5. ಕನಕದಾಸ, ಕಾ.ತ. ಚಿಕ್ಕಣ್ಣ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 6. ರಾಮಧಾನ್ಯ (ನಾಟಕ), ರಾಮಕೃಷ್ಣ ಮರಾಠೆ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 7. ಕನಕ ಶತಕ (ಕಾವ್ಯ), ಮಂಜುನಾಥ ಬೆಳವಾಡಿ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 8. ಕನಕದಾಸರ ಕೃತಿಗಳಲ್ಲಿ ಸಮಾನತಾ ಸಮಾಜ, ನರಸಿಂಹಮೂರ್ತಿ ಹೂವಿನಹಳ್ಳಿ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 9. ನಳಚರಿತ್ರೆ: ಒಂದು ಹೊಸನೋಟ, ಬಿರಾದಾರ ಬಿ.ಬಿ., ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ 10. ಕನಕದಾಸರು ಮತ್ತು ಆಧುನಿಕ ಚಿಂತನೆಗಳು: ಮುಖಾಮುಖಿ, ಶಿರೂರ ಬಿ.ವಿ., ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ 11. ಭಕ್ತಿ ಪರಂಪರೆ ಮತ್ತು ಕನಕದಾಸರು, ಸಂ: ಯಕ್ಕುಂಡಿಮಠ ಬಿ.ವಿ., ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ 12. ಕನಕ ಸಾಹಿತ್ಯ ಸೂಚಿ, ಸಂ: ಕೆ. ಮಲ್ಲಿಕಾರ್ಜುನ ಮತ್ತು ದೊಡ್ಡಮನಿ ಸಿ.ಡಿ., ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ 13. ಕನಕದಾಸರ ಸಾಹಿತ್ಯ ಅಧ್ಯಯನ, ಹರಿಲಾಲ ಪವಾರ ಮತ್ತು ಚಂದ್ರಶೇಖರ ರೊಟ್ಟಿಗವಾಡ, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ 14. ಮೋಹನ ತರಂಗಿಣಿ: ಸಾಂಸ್ಕೃತಿಕ ಸಂವಾದ, ರವಿರಾಜ ಶೆಟ್ಟಿ, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ 15. ರಾಮಧಾನ್ಯ ಚರಿತೆ: ಸಂಘರ್ಷದ ನೆಲೆ, ಸರೋಜಿನಿ ಸಿ. ಹಿರೇಮಠ, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ 16. ಆತ್ಮ ಆವ ಕುಲ (ಕವನ ಸಂಕಲನ), ಸಂ: ಬಾಳಣ್ಣ ಶೀಗೀಹಳ್ಳಿ, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ 17. ಎಲ್ಲಿರುವನೋ ರಂಗ (ನಾಟಕ), ಶಶಿಧರ ನರೇಂದ್ರ, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ 18. ಕನಕದಾಸರ ಸಮಗ್ರ ಕಾವ್ಯಾಧ್ಯಯನ, ಭಾಗ-1: ರಾಮಧಾನ್ಯ ಚರಿತೆ, ರವಿ ಬಿ.ಕೆ. ಮತ್ತು ಸರೋಜಿನಿ ಸಿ. ಹಿರೇಮಠ, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ 19. ಕನಕದಾಸರ ಸಮಗ್ರ ಕಾವ್ಯಾಧ್ಯಯನ, ಭಾಗ-2: ನಳಚರಿತ್ರೆ, ರವಿ ಬಿ.ಕೆ. ಮತ್ತು ಡಾ. ಎಚ್.ಎಚ್. ನದಾಫ್, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ 20. ಕನಕ ವಿಜಯ (ಕಾವ್ಯ), ಶ್ರೀ ನಿರುಪಾದೀಶ್ವರ ಮಹಾಸ್ವಾಮಿಗಳು, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ 21. ಹರಿಭಕ್ತಿಸಾರ, ಎನ್. ರಂಗನಾಥ ಶರ್ಮ, ಪ್ರ: ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಉಡುಪಿ 22. ಕನಕೋಪನಿಷತ್ತು, ಬನ್ನಂಜೆ ಗೋವಿಂದಾಚಾರ್ಯ, ಪ್ರ: ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಉಡುಪಿ 23. ಕನಕ ಕಾವ್ಯ ಸಂಪುಟ, ಎ.ವಿ. ನಾವಡ, ಪ್ರ: ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಉಡುಪಿ 24. ರಾಮಧಾನ್ಯ ಚರಿತೆ (ನಾಟಕ), ಅಂಬಾತನಯ ಮುದ್ರಾಡಿ, ಪ್ರ: ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಉಡುಪಿ 25. ದಾಸ-ಕನಕ ಪ್ರಭೆ, ಹೇರಂಜೆ ಕೃಷ್ಣಭಟ್ಟ, ಪ್ರ: ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಉಡುಪಿ 26. ಕನಕ ಮುಂಡಿಗೆ: ಅರ್ಥಾನುಸಂಧಾನ, ಮಾಧವಿ ಭಂಡಾರಿ, ಪ್ರ: ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಉಡುಪಿ 27. ಕನಕ ಚಿಂತನ 2007-08 (ಪ್ರಚಾರೋಪನ್ಯಾಸಗಳ ಸಂಕಲನ), ಸಂ: ಶಿವರಾಮ ಶೆಟ್ಟಿ ಬಿ., ಪ್ರ: ಕನಕದಾಸ ಅಧ್ಯಯನ ಪೀಠ / ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾನಿಲಯ 28. ಕನಕ ಚಿಂತನ 2009-10 (ಪ್ರಚಾರೋಪನ್ಯಾಸಗಳ ಸಂಕಲನ), ಸಂ: ಶಿವರಾಮ ಶೆಟ್ಟಿ ಬಿ., ಪ್ರ: ಕನಕದಾಸ ಅಧ್ಯಯನ ಪೀಠ / ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾನಿಲಯ 29. ಕನಕ ಚಿಂತನ 2011-12 (ಪ್ರಚಾರೋಪನ್ಯಾಸಗಳ ಸಂಕಲನ), ಸಂ: ಶಿವರಾಮ ಶೆಟ್ಟಿ ಬಿ., ಪ್ರ: ಕನಕದಾಸ ಅಧ್ಯಯನ ಪೀಠ / ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾನಿಲಯ 30. ಕನಕದಾಸರ ಕೀರ್ತನೆಗಳ ಶಬ್ದ ಪ್ರಯೋಗ ಕೋಶ, ಸಂ: ಶ್ರೀನಿವಾಸ ಹಾವನೂರ ಮತ್ತು ವಿ. ಕೃಷ್ಣ, ಪ್ರ: ಕನಕದಾಸ ಅಧ್ಯಯನ ಪೀಠ / ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾನಿಲಯ 31. ಕನಕದಾಸರ ಕೀರ್ತನೆಗಳು, ಸಂ: ಪಾವಂಜೆ ಗುರುರಾವ್, ಪ್ರ: ಕನಕದಾಸ ಅಧ್ಯಯನ ಪೀಠ / ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾನಿಲಯ 32. ಕನಕನ ಸುತ್ತಮುತ್ತ: ಸಂಕಥನಗಳ ಜಿಜ್ಞಾಸೆ, ಸಂ: ಶಿವರಾಮ ಶೆಟ್ಟಿ ಬಿ., ಪ್ರ: ಕನಕದಾಸ ಅಧ್ಯಯನ ಪೀಠ / ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾನಿಲಯ 33. ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ (ಕನಕದಾಸ ಅಧ್ಯಯನ ಸಮಗ್ರ ಸಂಪುಟ ಭಾಗ: 1), ಸಂ: ಶಿವರಾಮ ಶೆಟ್ಟಿ ಬಿ., ಪ್ರ: ಕನಕದಾಸ ಅಧ್ಯಯನ ಪೀಠ / ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾನಿಲಯ 34. ಸಂತಕವಿ ಕನಕದಾಸರು, ಡಾ. ಚಿಕ್ಕಮಗಳೂರು ಗಣೇಶ, ಪ್ರ: ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರು 35. ಕಾಲಜ್ಞಾನಿ ಕನಕ (ನಾಟಕ), ಕಿ.ರಂ. ನಾಗರಾಜ ಇಂಗ್ಲಿಷಿನಲ್ಲಿ 1. Kanakadas Ramadhanya Charite, Shashidhara G. Vaidya, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 2. Heritage Sites Associated with the Saint-Poet Kanakadas, Jagannath R. Genannavar, Tr: Shankar D.A., ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 3. Kanakadasaru, Chikkanna K.T., Tr: Prakash H.S.M., ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 4. Kanakadas: An Ardent Devotee of Lord Adikeshava, Basavaraj Naikar, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 5. Kanakadasa's Revolution: A Radical Reading, K. Raghavendra Rao, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ 6. Kanakadasa and the Tradition of Religious Humanism in Karnataka, K. Raghavendra Rao, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ಹಿಂದಿಯಲ್ಲಿ 1. ಕನಕದಾಸ, ಕಾ.ತ. ಚಿಕ್ಕಣ್ಣ, ಅನು: ಶ್ರೀನಿವಾಸ ಮೂರ್ತಿ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 2. ಕನ್ನಡ ಸಂತ ಕವಿ ಕನಕದಾಸ, ಸಂ: ಜಗನ್ನಾಥ ಆರ್. ಗೇನಣ್ಣವರ, ಅನು: ಶೋಭಾ ನಾಯಕ, ಚಂದ್ರಕಾಂತ ಪೋಕಾಣೆ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 3. ಸಂತ ಕವಿ ಕನಕದಾಸ, ಶಶಿ ಶ್ಯಾಮ್ಸಿಂಗ್, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 4. ಕನಕದಾಸ್: ಏಕ್ ಅನುಶೀಲನ್, ನಂದಿನಿ ಗುಂಡೂರಾವ್, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ತೆಲುಗಿನಲ್ಲಿ 1. ಭಕ್ತ ಶ್ರೀ ಕನಕದಾಸರು ಸಂದರ್ವಿನ ಪವಿತ್ರ ಸ್ಥಳಂ, ಜಗನ್ನಾಥ ಆರ್. ಗೇನಣ್ಣವರ, ಅನು: ಪದ್ಮಾ ಸಿ., ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 2. ರಾಮಧಾನ್ಯ (ನಾಟಕ), ರಾಮಕೃಷ್ಣ ಮರಾಠೆ, ಅನು: ಲಕ್ಷ್ಮೀದೇವಿ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ 3. ಕನಕದಾಸ, ಕಾ.ತ. ಚಿಕ್ಕಣ್ಣ, ಅನು: ಪುಟ್ಟಮರಾಜ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ ಚಲನಚಿತ್ರ ಡಾ. ರಾಜ್ಕುಮಾರ್ ಅವರು ಮುಖ್ಯ ಭೂಮಿಕೆಯಲ್ಲಿರುವ 'ಭಕ್ತ ಕನಕದಾಸ' ಚಲನಚಿತ್ರವು 1960ರಲ್ಲಿ ತೆರೆಕಂಡಿದೆ. ನಿರ್ದೇಶಕರು ವೈ.ಆರ್.ಸ್ವಾಮಿ. ಈ ಚಿತ್ರದಲ್ಲಿ ಅಳವಡಿಸಲಾಗಿರುವ ಕನಕದಾಸರ ಕೀರ್ತನೆಗಳನ್ನು ಪಿ.ಬಿ. ಶ್ರೀನಿವಾಸ್ ಅವರು ಹಾಡಿದ್ದಾರೆ. 'ಕುಲಕುಲಕುಲವೆಂದು ಹೊಡೆದಾಡದಿರಿ', 'ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ', 'ದೀನ ನಾನು ಸಮಸ್ತ ಲೋಕಕೆ ದಾನಿ ನೀನು' ಹಾಡುಗಳು ಜನಪ್ರಿಯವಾಗಿವೆ. https://kn.wikipedia.org/s/jy ವಿಕಿಪೀಡಿಯದಿಂದ, ಇದು ಉಚಿತ ವಿಶ್ವಕೋಶ #Having_Adhar_Card_Aadhar_Connected_Mobile_Number_Anywhere_in_INDIA_Can_get_COVID_VACCINATION_FREE #ಭಾರತದ_ಯಾವುದೇ_ಸ್ಥಳ_ಊರಿನಲ್ಲಾದರೂ_ಕರೋನಾ_ವ್ಯಾಕ್ಸಿನ್_ಪಡೆಯಬಹುದು_ಆಧಾರ್_ಕಾರ್ಡು_ಮತ್ತು_ಆಧಾರ್_ಕಾರ್ಡು_ಜೋಡಿತ_ಮೊಬೈಲ್_ಇದ್ದರೆಸಾಕು ಹೊಸಬೆಳಕು ಟ್ರಸ್ಟ್(ರಿ ) & ಶ್ರೀ ಸಾಯಿ ವಿನೋದ್ ಚಾರಿಟಬಲ್ ಟ್ರಸ್ಟ್(ರಿ ) ವತಿಯಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರಕಟಣೆ ಜೀವಗಳ ಉಳಿಸುವ ಮಾಹಿತಿಯನ್ನು ದಯಮಾಡಿ ಶೇರ್ ಮಾಡಿ ಖಂಡಿತ ಪ್ರಾಣಗಳ ಉಳಿಸಬಲ್ಲದು. This Life Saving Information helps both Patients and also a Medical Staff. Do not ignore to Share this .. This information helps someone in Emergency Medical Need. #Fight_Againist_CORONA #Follow_CORONA_Rules #Stay_Safe_Stay_Healthy #Maintain_SMS_Sanitize_Mask_Socialdistance #Help_the_Community_IF_Possoble #Join_Hands_with_Corona_Warriors_to_Prevent_CORONA #Respect_Corona_Warriors_and_who_works_For_PUBLIC_Welfare #Co_Operate_with_Police_to_Prevent_Crimes Thanks to #BBMP #Chief_Minister_of_Karnataka #Health_Minister_of_Karnataka #BBMP_Commissionor #kannadaprabha #Vijayavani #Vishwavani #Udayavani #Prajavani #Suvana_times_of_karnataka #Samyukta_karnataka #Btv #Udayatv #Tv9Karnataka #Digvijaya #StarSuvarna #ZeeKannada #TV5 #PublicTV #KasturiTV #SuvarnaNews24/7 #RajNews #AmoghTV #News1st #Etv_Bharath #vaarthabharathi #Press_Club_of_Bangalore If Media or Somebody needs Soft copy of Details pl call me, I will mail it 9945028899 ನಲ್ಮೆಯ ಬಂಧುಗಳೇ . ಹೊಸಬೆಳಕು ಟ್ರಸ್ಟ್(ರಿ)-ಕತ್ತಲೆಯಿಂದ ಬೆಳಕಿನಡೆಗೆ ಎಂಬ ದ್ಯೇಯವಾಕ್ಯದೊಂದಿಗೆ ಶ್ರೀ ಸಾಯಿ ವಿನೋದ್ ಚಾರಿಟಬಲ್ ಟ್ರಸ್ಟ್(ರಿ)-ನೊಂದ ಸಮಾಜದತ್ತ ಎಂಬ ದ್ಯೇಯವಾಕ್ಯದೊಂದಿಗೆ ಪ್ರಾರಂಬಿಸಿ ಹಲವಾರು ಸಮಾಜಿಕ ಕಾರ್ಯಕ್ರಮಗಳನ್ನು ನಡೆಸಿ ಕೊಂಡು ಬರುತ್ತಿರುವುದು ತಮಗೆಲ್ಲಾ ತಿಳಿದ ವಿಷಯ. ನೊಂದ ಸಮಾಜಕ್ಕೆ ಮತ್ತು ಕತ್ತಲೆಯಿಂದ ಬೆಳಕಿನಡೆಗೆ ಪಯಣದಲ್ಲಿ ಕರ್ನಾಟಕ ರಾಜ್ಯದ ಜಿಲ್ಲಾವಾರು ಸರ್ಕಾರಿ.ಖಾಸಗಿ ಆಸ್ಪತ್ರೆಗಳು ಮತ್ತು ಮೆಡಿಕಲ್ ಕಾಲೇಜುಗಳು ಹಾಗು ರಕ್ತನಿಧಿಗಳ ಸಂಪರ್ಕ ಮಾಹಿತಿ ,ಬೆಡ್ಡುಗಳ ಖಾಲಿ ಇರುವಿಕೆ..ವಾರ್ ರೂಮ್ ಮಾಹಿತಿ,ರಕ್ತದ ವ್ಯವಸ್ತೆ,ಆಕ್ಸಿಜನ್ ಮಾಹಿತಿ..ಅಂಬುಲೆನ್ಸ್ ಮಾಹಿತಿ ಇತರೆ ಸರ್ಕಾರದ ಕರೋನಾ ತಡೆಗಟ್ಟುವ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸುತ್ತಾ ಬರುತ್ತಿದ್ದೇವೆ.ಹಾಗು ಕರ್ನಾಟಕ ರಾಜ್ಯದಾದ್ಯಂತಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜುಗಳಲ್ಲಿ ಹಾಗು ರಕ್ತ ನಿದಿಗಳಲ್ಲಿ ಇಂದು ಲಭ್ಯವಿರುವ ರಕ್ತ / ಕೆಂಪು ರಕ್ತ ಕಣ/ಕಾಂಪೋನೆಂಟ್ಸ್/ಪ್ಲೇಟ್ಲೆಟ್ಸ್ ಗಳ ಮಾಹಿತಿಯನ್ನು ಕಲೆಹಾಕಿ ಸಮಾನ್ಯ ನಾಗರೀಕರಿಗೆ ಪ್ರಯೋಜನವಾಗುವ ರೀತಿಯಲ್ಲಿ Face Book / Watsup / Tweeter /Hosabelautrust Blog ನಲ್ಲಿ ಪ್ರಕಟಿಸುತ್ತಿದ್ದೇವೆ. ರಕ್ತವು ದೊರೆಯದೆ ಯಾವ ತಾಯಿಯೂ ಮರಣಿಸುವುದು ಬೇಡಾ. ಈ ಜೀವ ಉಳಿಸುವ ಮಾಹಿತಿಯನ್ನು ದಯಮಾಡಿ ಶೇರ್ ಮಾಡಿ ಖಂಡಿತ ಪ್ರಾಣಗಳ ಉಳಿಸಬಲ್ಲದು. Kindly Share this message definitely it saves someone. ನಮ್ಮಗಳ ಪ್ರಯತ್ನಕ್ಕೆ ನಿಮ್ಮಗಳ ಸಹಕಾರವಿರಲಿ #Fight_Againist_CORONA.. Kindly Donate Blood Save Lifes before COVID VACCINATION #ಹೊಸಬೆಳಕು_ಟ್ರಸ್ಟ್ #ಶ್ರೀ_ಸಾಯಿ_ವಿನೋದ್_ಚಾರಿಟಬಲ್_ಟ್ರಸ್ಟ್ ಬುದ್ಧ ಭೀಮ ವಂಧನೆಗಳೊಂದಿಗೆ Dr.Ramakrishna.M Founder_Managing_Trustee #Hosabelaku_Trust 9945028899 Jigani Vinod Founder_ManagingTrustee #Sri Sai Vinod_Charitabale_Trust 9036800123 Thanks & Regards Dr.M.RAMAKRISHNA ( Hon Doctorate in Health Care & Social Services) 9945028899 ( Founder & Managing Trustee) Member : Eye Bank Association of India. Bhagavan Buddha & Dr.B.R.Ambedkar National Fellowship Awardee. Salumara Thimmakka International Greenery Ward 2019. And many more....Address : Hosabelaku Trust(R) ಹೊಸಬೆಳಕು ಟ್ರಸ್ಟ್ (ರಿ ) ಜಿಗಣಿ No.105. Hosabelaku Nilaya.Near Balaji Nagar Water Tank.Ward No 5.Yallammadevi Nagar.JIGANI (Village & Post) Anekal Talluk Bangalore 560 105 Mob : 99450 28899 / 9342171646 / 9141151699 email: hosabelakutrust@gmail.com, jiganiramakrishna@rediffmail.com Donate Eyes - Gift Sight, Donate Blood - Save Life, Plant Tree - Save Nation

No comments:

Post a Comment